ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ, ಪ್ರೊಸಸ್ ಸರ್ವರ್ ಒಟ್ಟು 62 ಹುದ್ದೆಗಳಿಗೆ ಅರ್ಜಿ ಕರೆದಿದ್ದಾರೆ.
ಅರ್ಜಿದಾರರು ಈ ಹುದ್ದೆಗೆ ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆ, ಮಾಹಿತಿಯನ್ನು ಓದಿಕೊಂಡು ಮನದಟ್ಟು ಮಾಡಿಕೊಳ್ಳಬೇಕು. ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ, ಶುಲ್ಕ, ಇನ್ನಿತರ ಮಾಹಿತಿಗಳನ್ನು ಓದಿಕೊಂಡು ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳನ್ನು ಮೊದಲೇ ಸಿದ್ದಪಡಿಸಿಕೊಂಡಿರಬೇಕು, ಈ ಮೂಲ ದಾಖಲಾತಿಗಳನ್ನು ನೇಮಕಾತಿ ಸಮಯದಲ್ಲಿ ಸಲ್ಲಿಸಬೇಕಾಗಿರುತ್ತದೆ.
ಆನ್ಲೈನ್ ನಲ್ಲಿ ಅರ್ಜಿ ಭರ್ತಿ ಮಾಡುವಾಗ ನಿಮ್ಮ ಹೆಸರು, ತಂದೆಯ ಹೆಸರು, ತಾಯಿಯ ಹೆಸರು, ಜಾತಿ, ಉಪಜಾತಿ, ಲಿಂಗ, ಹುಟ್ಟಿದ ದಿನಾಂಕ, ಪ್ರಮಾಣಪತ್ರಗಳ ದಿನಾಂಕ, ಕನ್ನಡ ಅಭ್ಯರ್ಥಿಯೇ, ಗ್ರಾಮೀಣ ಅಭ್ಯರ್ಥಿಯೇ,ಯೋಜನಾ ನಿರಾಶ್ರಿತರೇ, ಮಾಜಿ ಸೈನಿಕರೇ, ಸೇವಾ ನಿರತ ಅಭ್ಯರ್ಥಿಯೇ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯೇ,ವಿದ್ಯಾರ್ಹತೆ ಫಲಿತಾಂಶ ಪ್ರಕಟವಾದ ದಿನಾಂಕ, ಶೇಕಡವಾರು/ಅಂಕಗಳನ್ನು ನಿಮ್ಮ ಅಂಕಪಟ್ಟಿಯಲ್ಲಿರುವಂತೆ ಸರಿಯಾಗಿ ನಮೂದಿಸಬೇಕು.
1. ಜವಾನ- ಈ ಹುದ್ದೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಒಟ್ಟು ಹುದ್ದೆಗಳು 56
ಆದೇಶ ಜಾರಿಕಾರ- ಈ ಹುದ್ದೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.ಒಟ್ಟು 6 ಹುದ್ದೆಗಳು
ವಾಹನಾ ಚಾಲನಾ ಪರವಾನಗಿಯನ್ನು ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ವಯೋಮಿತಿ:
ಸಾಮಾನ್ಯ ಅಭ್ಯರ್ಥಿಗಳು 18-40 ವರ್ಷದೊಳಗಿರಬೇಕು.
2ಎ/2ಬಿ/3ಎ/3ಬಿ 18-43 ವರ್ಷದೊಳಗಿರಬೇಕು.
ಎಸ್ ಸಿ/ಎಸ್ ಟಿ/ಪ್ರ-1 18-45 ವರ್ಷದೊಳಗಿರಬೇಕು.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳಿಗೆ 200 ರೂ.ಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 100 ರೂ.ಗಳು
ಎಸ್ ಸಿ/ಎಸ್ ಟಿ/ಪ್ರ-1,ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 23-07-2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:24-08-2026
ಅರ್ಜಿ ಸಲ್ಲಿಸಲು ಬೇಕಾದ ದಾಖಲಾತಿಗಳು:
1.ಎಸ್.ಎಸ್.ಎಲ್.ಸಿ. ಅಂಕಪಟ್ಟಿ
2.ಜಾತಿ- ಆದಾಯ ಪ್ರಮಾಣಪತ್ರ
3. ಆಧಾರ್ ಕಾರ್ಡ್
4.ಪಾಸ್ ಪೋರ್ಟ್ ಸೈಜ್ ಪೋಟೋ
5. ಕನ್ನಡ ಮಾಧ್ಯಮ ಪ್ರಮಾಣ ಪತ್ರ(1-10ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೆ ಈ ಕನ್ನಡ ಮಾಧ್ಯಮ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು )
6. ಗ್ರಾಮೀಣ ಪ್ರಮಾಣಪತ್ರ (1-10ನೇ ತರಗತಿಯವರೆಗೆ ಗ್ರಾಮೀಣ ಭಾಗದಲ್ಲಿ ವ್ಯಾಸಂಗ ಮಾಡಿದ್ದರೆ ಈ ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಪಡೆದಿಟ್ಟುಕೊಂಡಿರಬೇಕು)
7.ಇನ್ನಿತರ ಮೀಸಲಾತಿ ದಾಖಲಾತಿಗಳು(ಉದಾ:ಅಂಗವಿಕಲರಾಗಿದ್ದಲ್ಲಿ, ಮಾಜಿ ಸೈನಿಕರಾಗಿದ್ದಲ್ಲಿ, ಕಲ್ಯಾಣ ಕರ್ನಾಟಕ ಅಭ್ಯರ್ಥಿಯಾಗಿದ್ದಲ್ಲಿ)
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
